TSK

TSK · ನಹೂಮ 2:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.

ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.

ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.

¶ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.