ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
TSK
TSK · ನಹೂಮ 3:19
Treasury of Scripture Knowledge references in ಕನ್ನಡ IRV.
ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?
ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.
ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.
ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.
“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.
¶ ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?
ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.