ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.
TSK
TSK · ನೆಹೆಮಿಯ 2:19
Treasury of Scripture Knowledge references in ಕನ್ನಡ IRV.
¶ ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.
ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.
¶ ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು.
ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
¶ “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’