TSK

TSK · ನೆಹೆಮಿಯ 4:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.

¶ ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ

¶ ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.

¶ ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.

ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.

¶ ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.

¶ ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.

ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,

ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.

¶ ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.

ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”

ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.