ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
TSK
TSK · ನೆಹೆಮಿಯ 6:13
Treasury of Scripture Knowledge references in ಕನ್ನಡ IRV.
ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
¶ “‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’
‹ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.›
ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.