TSK

TSK · ನೆಹೆಮಿಯ 9:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.

ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

¶ ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.

ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.

ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.

¶ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,

ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.

ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.

ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.

ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.

ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!

ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;

ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.