¶ “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.
TSK
TSK · ನೆಹೆಮಿಯ 9:32
Treasury of Scripture Knowledge references in ಕನ್ನಡ IRV.
ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.
¶ ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.
“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
¶ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.
ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.
ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.
ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
¶ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
¶ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,
ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.