TSK

TSK · ಅರಣ್ಯಕಾಂಡ 1:53

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.

¶ “ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.

ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”

ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”

ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.

ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.

ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.

ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.