ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.
TSK
TSK · ಅರಣ್ಯಕಾಂಡ 10:1
Treasury of Scripture Knowledge references in ಕನ್ನಡ IRV.
ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.
ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.
ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.
ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.
ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.
ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.