ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
TSK
TSK · ಅರಣ್ಯಕಾಂಡ 10:12
Treasury of Scripture Knowledge references in ಕನ್ನಡ IRV.
¶ ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.
¶ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.
ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.
¶ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.
¶ ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
¶ ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.
¶ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್ಬರ್ನೇಯಕ್ಕೆ ಸೇರಿದೆವು.
¶ ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;