¶ ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.
TSK
TSK · ಅರಣ್ಯಕಾಂಡ 10:33
Treasury of Scripture Knowledge references in ಕನ್ನಡ IRV.
ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.
ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
ಮೂರು ದಿನಗಳಾದ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ
ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.
ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ
ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.
ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.
ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.