¶ ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
TSK
TSK · ಅರಣ್ಯಕಾಂಡ 11:10
Treasury of Scripture Knowledge references in ಕನ್ನಡ IRV.
¶ ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.
ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.
ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, ‹“ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.›