TSK

TSK · ಅರಣ್ಯಕಾಂಡ 12:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.

ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.

ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

‹ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.›

¶ ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,

¶ ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.

ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.