¶ ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
TSK
TSK · ಅರಣ್ಯಕಾಂಡ 12:8
Treasury of Scripture Knowledge references in ಕನ್ನಡ IRV.
ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.
ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.
ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.
ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.
¶ ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?
“ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,
ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
‹ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.›
ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.