ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
TSK
TSK · ಅರಣ್ಯಕಾಂಡ 14:10
Treasury of Scripture Knowledge references in ಕನ್ನಡ IRV.
ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.
¶ ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.
ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.
¶ ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›
¶ ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,