ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.
TSK
TSK · ಅರಣ್ಯಕಾಂಡ 14:12
Treasury of Scripture Knowledge references in ಕನ್ನಡ IRV.
ವಿಮೋಚನಕಾಂಡ 5:3
TSK
ಅರಣ್ಯಕಾಂಡ 16:46
TSK
ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
2 ಸಮುವೇಲನು 24:1
TSK
¶ ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
¶ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.