TSK

TSK · ಅರಣ್ಯಕಾಂಡ 14:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.

‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ

ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.

¶ ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.

ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.

ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.

ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.