TSK

TSK · ಅರಣ್ಯಕಾಂಡ 14:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.

ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.

ಆದುದರಿಂದ ಅವರ ಪೂರ್ವಿಕರಿಗೆ ಪ್ರತಿಯಾಗಿ ಹುಟ್ಟಿದ ಗಂಡು ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿಮಾಡಿರಲಿಲ್ಲ. ಆದುದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.

ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.

ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.

“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.