TSK

TSK · ಅರಣ್ಯಕಾಂಡ 14:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವರು ನಲ್ವತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು.

¶ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.

ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.

“ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.

ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.

ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.

ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ,

¶ “ಅಷ್ಟು ದಿನಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಪಾಪವನ್ನು ಅನುಭವಿಸಬೇಕು; ವರ್ಷ ಒಂದಕ್ಕೆ ಒಂದು ದಿನದ ಮೇರೆಗೆ ನಲ್ವತ್ತು ದಿನ ಅವರ ಪಾಪವನ್ನು ಹೊರಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.

¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”

ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!

¶ ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.