TSK

TSK · ಅರಣ್ಯಕಾಂಡ 14:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.

ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.

ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.