ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
TSK
TSK · ಅರಣ್ಯಕಾಂಡ 14:37
Treasury of Scripture Knowledge references in ಕನ್ನಡ IRV.
ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.
ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.
ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.
ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.