ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
TSK
TSK · ಅರಣ್ಯಕಾಂಡ 14:8
Treasury of Scripture Knowledge references in ಕನ್ನಡ IRV.
ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.
ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.
“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.
ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.
ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?