ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
TSK
TSK · ಅರಣ್ಯಕಾಂಡ 15:20
Treasury of Scripture Knowledge references in ಕನ್ನಡ IRV.
ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.
ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.
ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
‹ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.›
¶ ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.
ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.