TSK

TSK · ಅರಣ್ಯಕಾಂಡ 15:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.

ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.

ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.

ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.

ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.

ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು.

ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.