ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.
TSK
TSK · ಅರಣ್ಯಕಾಂಡ 16:28
Treasury of Scripture Knowledge references in ಕನ್ನಡ IRV.
“ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.
ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.
ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.
¶ ‹“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.›
‹ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.›
‹ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.›‹ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.›