ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.
TSK
TSK · ಅರಣ್ಯಕಾಂಡ 16:46
Treasury of Scripture Knowledge references in ಕನ್ನಡ IRV.
¶ “ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.
ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”
ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
¶ ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.
ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.
¶ ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.
¶ ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.