“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.
TSK
TSK · ಅರಣ್ಯಕಾಂಡ 17:10
Treasury of Scripture Knowledge references in ಕನ್ನಡ IRV.
“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.
ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
¶ “ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.
ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು.
ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.
ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.