ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
TSK
TSK · ಅರಣ್ಯಕಾಂಡ 18:3
Treasury of Scripture Knowledge references in ಕನ್ನಡ IRV.
ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.
ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು.
ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.