ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.
TSK
TSK · ಅರಣ್ಯಕಾಂಡ 19:20
Treasury of Scripture Knowledge references in ಕನ್ನಡ IRV.
¶ “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,
ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
‹ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.›
ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”