TSK

TSK · ಅರಣ್ಯಕಾಂಡ 19:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

¶ “ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.

“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.

“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.