ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
TSK
TSK · ಅರಣ್ಯಕಾಂಡ 20:11
Treasury of Scripture Knowledge references in ಕನ್ನಡ IRV.
“ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.
ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.
ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.
ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,
ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.
ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.
ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.
ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.