TSK

TSK · ಅರಣ್ಯಕಾಂಡ 20:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.

“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.

ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;

“ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.

“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.

¶ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.

ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.

ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.

ಆತನು ಅವರಿಗೆ, ‹“ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.›‹ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,›

ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”

ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.