TSK

TSK · ಅರಣ್ಯಕಾಂಡ 20:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.

“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.

ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.