ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
TSK
TSK · ಅರಣ್ಯಕಾಂಡ 20:8
Treasury of Scripture Knowledge references in ಕನ್ನಡ IRV.
ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.
ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.
ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.
ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.
ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು, ಅರಣ್ಯದಲ್ಲಿ ನದಿಯಾಗಿ ಹರಿಯಿತು.
ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
ಯೇಸು ಹೇಳಿದ್ದೇನಂದರೆ, ‹“ನಿಮಗೆ ದೇವರಲ್ಲಿ ನಂಬಿಕೆಯಿರಲಿ.›
ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.
ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,