ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.
TSK
TSK · ಅರಣ್ಯಕಾಂಡ 21:9
Treasury of Scripture Knowledge references in ಕನ್ನಡ IRV.
¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
‹ಇದಲ್ಲದೆ›‹ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.›
‹ಆದರೆ›‹ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು”› ಎಂದು ಹೇಳಿದನು.
ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.