TSK

TSK · ಅರಣ್ಯಕಾಂಡ 22:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು

ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.

ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.

ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.

ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.