ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.
TSK
TSK · ಅರಣ್ಯಕಾಂಡ 22:32
Treasury of Scripture Knowledge references in ಕನ್ನಡ IRV.
ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
¶ ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು.
ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.
ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.
ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.
ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?