ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
TSK
TSK · ಅರಣ್ಯಕಾಂಡ 22:5
Treasury of Scripture Knowledge references in ಕನ್ನಡ IRV.
ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.
ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.
ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.
ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.
ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.
ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.