TSK

TSK · ಅರಣ್ಯಕಾಂಡ 23:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.

ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.

ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.

ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.