ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
TSK
TSK · ಅರಣ್ಯಕಾಂಡ 23:9
Treasury of Scripture Knowledge references in ಕನ್ನಡ IRV.
ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.
ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”
ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.