TSK

TSK · ಅರಣ್ಯಕಾಂಡ 24:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.

ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.

ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’

ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.

ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ,

‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›