TSK

TSK · ಅರಣ್ಯಕಾಂಡ 24:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.

ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?

ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು.

ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.