TSK

TSK · ಅರಣ್ಯಕಾಂಡ 24:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.

ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.

ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.

ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.

ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.

ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

¶ ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.

ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.

“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.

ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.

¶ ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,

¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.