TSK

TSK · ಅರಣ್ಯಕಾಂಡ 24:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.

ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.

ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.

ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.

ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.

ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;

¶ ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ.

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, ‹“ಹೆದರಬೇಡ,›‹ನಾನು ಮೊದಲನೆಯವನೂ, ಕಡೆಯವನೂ,›