¶ ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.
TSK
TSK · ಅರಣ್ಯಕಾಂಡ 24:7
Treasury of Scripture Knowledge references in ಕನ್ನಡ IRV.
ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.
ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.
¶ ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.
ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.
ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
¶ ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.