ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,
TSK
TSK · ಅರಣ್ಯಕಾಂಡ 25:1
Treasury of Scripture Knowledge references in ಕನ್ನಡ IRV.
¶ ಮೋಶೆಯು ಅವರಿಗೆ, “ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?
ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.
¶ ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.
ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.