ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
TSK
TSK · ಅರಣ್ಯಕಾಂಡ 25:2
Treasury of Scripture Knowledge references in ಕನ್ನಡ IRV.
ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,
ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.
ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.
ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.
ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.