TSK

TSK · ಅರಣ್ಯಕಾಂಡ 25:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

¶ ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.

ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.

ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ

ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,

“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.

ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.

ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.

¶ ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.

ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.