TSK

TSK · ಅರಣ್ಯಕಾಂಡ 25:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.

“ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.

ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.

ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.