¶ ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.
TSK
TSK · ಅರಣ್ಯಕಾಂಡ 26:10
Treasury of Scripture Knowledge references in ಕನ್ನಡ IRV.
ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.
ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.
“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.
ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.
ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.